ಕಲಬುರಗಿ: ಕಟ್ಟಡ ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆ ಇಡೇರಲಿ: ನಗರದಲ್ಲಿ ಕರಾಕನಿಕಾಮ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ನಾಡಿಗೇರ ಆಗ್ರಹ
ಕಟ್ಟಡ ಕಾರ್ಮಿಕರು ದೇಶದ ಆರ್ಥಿಕಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದರೂ, ಅವರಿಗೆ ಸರಿಯಾದ ಸಮಯದಲ್ಲಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಎಸ್. ನಾಡಿಗೇರ ಅವರು ಸೋಮವಾರ 2 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿ ವಿಷಾದ ವ್ಯಕ್ತಪಡಿಸಿದರು.. ಕಾರ್ಮಿಕ ಇಲಾಖೆಯ ಆನ್ಲೈನ್ ತಂತ್ರಾಂಶದಲ್ಲಿ ತಾಂತ್ರಿಕ ತೊಂದರೆಗಳು ಇರುವುದರಿಂದ ಅನೇಕ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪುತ್ತಿಲ್ಲ. ತಂತ್ರಾಂಶವನ್ನು ಶೀಘ್ರ ಸರಿಪಡಿಸಿ ಫಲಾನುಭವಿಗಳ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು.