ನರಗುಂದ: ತಾಲೂಕಿನ ಭೈರನಹಟ್ಟಿ ಬಳಿ ಲಾರಿ ಹಾಗೂ ಕಾರ್ ನಡುವೆ ಅಪಘಾತ ಸ್ಥಳದಲ್ಲಿ ದಂಪತಿಗಳು ಸಾವು
Nargund, Gadag | Nov 6, 2024 ಲಾರಿ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರ್ ನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಸಾವನ್ನಪ್ಪಿದ್ದಾರೆ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನ ನರಗುಂದ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಬೆಳ್ಳಂಬೆಳಿಗ್ಗೆ ಈ ರಸ್ತೆ ಅಪಘಾತ ನಡೆದಿದೆ.