ಹುಬ್ಬಳ್ಳಿ: ಈರುಳ್ಳಿ ಬೆಲೆ ಕುಸಿತದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತ ಮುಖಂಡ ಹೇಮನಗೌಡ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕ್ವಿಂಟಲ್ಗೆ ಕೇವಲ 300 ರೂ. ಬೆಲೆ ಸಿಗುತ್ತಿದ್ದು, ಇದು ರೈತರ ಬದುಕಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಕೂಡಲೇ ಬೆಲೆಯನ್ನು 2500 ರೂ.ಗೆ ಏರಿಸಬೇಕು, ಇಲ್ಲವಾದರೆ ಸರ್ಕಾರದ ವಿರುದ್ಧ ಬಾರ್ಕೋಲ್ ಚಳುವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.