ಮಳವಳ್ಳಿ: ಚೆಸ್ಕಾಂ ವತಿಯಿಂದ ಎಲ್ ಟಿ ಎ ಬಿ ಕವಡ್೯ ವಾಹಕ ಕೇಬಲ್ ಅಳವಡಿಕೆ ಕಾಮಗಾರಿಗೆ ಶಾಸಕ ನರೇಂದ್ರಸ್ವಾಮಿ ಬೆಳಕವಾಡಿಯಲ್ಲಿ ಚಾಲನೆ
ಮಳವಳ್ಳಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ತಾಲ್ಲೂಕಿನ ಗ್ರಾಮೀಣ ಭಾಗದ ವಿದ್ಯುತ್ ಮಾರ್ಗಗಳಿಗೆ ಎಲ್ ಟಿ ಎ ಬಿ 11 ಕೆ ವಿ ಕವಡ್೯ ವಾಹಕ ಕೇಬಲ್ ಅಳವಡಿಸುವ 10 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದ ಪಿ ಎಂ ನರೇಂದ್ರಸ್ವಾಮಿ ಚಾಲನೆ ನೀಡಿದರು. ತಾಲ್ಲೂಕಿನ ಬೆಳಕವಾಡಿ ಗ್ರಾಮ ದ ಚೆಸ್ಕಾಂ ಕಚೇರಿ ಆವರಣದಲ್ಲಿ ಶನಿವಾರ ಸಾಯಂಕಾಲ 4.30 ರ ಸಮಯದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಈಗಾಗಲೇ ಮಳವಳ್ಳಿ ಪಟ್ಟಣದಲ್ಲಿ 5 ಕೋಟಿ ವೆಚ್ಚದಲ್ಲಿ ಸದರಿ ಎಲ್ ಟಿ ಎ ಬಿ ಕವಡ್೯ ವಾಹಕ ಕೇಬಲ್ ಅಳವಡಿಕೆ ಕಾರ್ಯ ನಡೆದಿದ್ದು ಗ್ರಾಮೀಣ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಈ ಕೇಬಲ್ ಅಳವಡಿಸಲಾಗುವುದು ಎಂದರು.