ತೀರ್ಥಹಳ್ಳಿ: ಪಟ್ಟಣದ ಸೊಪ್ಪುಗುಡ್ಡೆ ಸೇರಿ ಮೂರು ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳ ದಾಳಿ
ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿಯಲ್ಲಿ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳ ತಂಡವು ಬುಧವಾರ ಬೆಳಗ್ಗೆ 8 ಗಂಟೆಗೆ ವೇಳೆ ದಾಳಿ ನಡೆಸಿದ್ದಾರೆ. ಹಳೆ ಆರೋಪಿ ಅಬ್ದುಲ್ ಮತೀನ್, ಬಾಂಬರ್ ಮುಸಾವೀರ್ ಹುಸೇನ್, ಬಾಂಬರ್'ಗೆ ಸಹಾಯ ಮಾಡಿದ ಸಾಧಾರರ್ ನವೀದ್ ಎನ್ನುವವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬಾಂಬರ್ ಮುಸಾವೀರ್ ಹುಸೇನ್ ಚೆನ್ನೈನಿಂದ ಬಂದಾಗ, ಮತೀನ್, ನವೀದ್ ಸಹಾಯ ಮಾಡಿದ್ದರು ಎಂದು ಹೇಳಲಾಗಿದೆ. ಸದ್ಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿರುವ ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ