ಸರ್ಕಾರಿ ಶಿಕ್ಷಕರು ಬಂದ ಪುಟ್ಟ ಹೋದ ಪುಟ್ಟ ಎಂದರೆ ಸಾಲದು ; ಶಾಸಕ ಸಮೃದ್ಧಿ ಮಂಜುನಾಥ್ ಮುಳಬಾಗಿಲು : ನಾನು ಕಾರ್ಯಕ್ರಮಕ್ಕೆ ಬಂದಾಗ ದಯವಿಟ್ಟು ಸನ್ಮಾನ ಮಾಡಬೇಡಿ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ತಾಲೂಕು ಪ್ರಥಮ ಸ್ಥಾನವನ್ನು ನೀಡುವುದೇ ನನಗೆ ಬಹುದೊಡ್ಡ ಸನ್ಮಾನ ಎಂದು ಶಾಸಕ ಸಮೃದ್ಧಿ ಮಂಜುನಾಥ್ ಹೇಳಿದರು. ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿ, ದಿನೇ ದಿನೇ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದಿದೆ ಈ ತಾಲೂಕಿನಲ್ಲಿ ೮೬ ಕನ್ನಡ ಶಾಲೆಗಳನ್ನು ಮುಚ್ಚುವಂತಹ ಸ್ಥಿತಿ ನಿರ್ಮಾಣವಾಗಿದೆ ಅದಕ್ಕೆ ಪ್ರಮುಖ ಕಾರಣ ಶಿಕ್ಷಕರು ಆತ್ಮವಲೋಕನ ಮಾಡಿಕೊಳ್ಳಬೇಕೆದರು.