ಯಲ್ಲಾಪುರ : ತಾಲೂಕಿನ ಮಲವಳ್ಳಿಯ ಮಾವಿನಮನೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದಲ್ಲಿ ಬುಧವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಸ್ವತ್ತುಗಳು ಸುಟ್ಟು ಕರಕಲಾಗಿದೆ. ಸಂಘದ ಯುಪಿಎಸ್ ಸಿಸ್ಟಂ, ಜನರೇಟರ್ ಸೇರಿದಂತೆ ವಿವಿಧ ವಸ್ತುಗಳು ಬೆಂಕಿಗೆ ಸುಟ್ಟುಹೋಗಿವೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದ್ದು ಅಪಾರ ಹಾನಿಯಾಗಿದೆ. ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.