ಜೀವನದಲ್ಲಿ ತಗೆದುಕೊಳ್ಳುವ ಸಣ್ಣ ಪುಟ್ಟ ಆಯ್ಕೆಗಳು ಜೀವನ ಏನು ಎಂಬುವ ಪಾಠವನ್ನು ಕಲಿಸುತ್ತವೆ. ಆದ್ದರಿಂದ ನಿರಂತರವಾಗಿ ಪ್ರಯತ್ನಿಸಿದಾಗ ಮಾತ್ರ ಎಂತಹ ಸಾಧನೆಯನ್ನೂ ಮಾಡಬಹುದಾಗಿದೆ ಎಂದು ಜೀವಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು ಹೇಳಿದರು. ಅವರಿಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿಶ್ವವಿದ್ಯಾಲಯದ ನಿರಂತರ ಬದಲಾವಣೆಯನ್ನು ನಾವು ಕಾಣಬಹುದಾಗಿದೆ ಎಂದರು.