ಬೆಂಗಳೂರು ಉತ್ತರ: 'ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ವಿಚಾರ,' ಪೊಲೀಸ್ ಕಮಿಷನರ್ ಹೇಳಿದ್ದೇನು?
ರೇಣುಕಾಸ್ವಾಮಿ ಹತ್ಯೆ ಪ್ರಕರಣದ 7 ಜನ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅದರನ್ವಯ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ವಿಭಾಗದ ಡಿಸಿಪಿ, ಪ್ರಕರಣದ ತನಿಖಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಆಗಸ್ಟ್ 14ರಂದು ಮಧ್ಯಾಹ್ನ 1 ಗಂಟೆಗೆ ವಸಂತನಗರದ ಕಚೇರಿಯಲ್ಲಿ ಮಾತನಾಡಿದ ಅವರು, ಆರೋಪಿಗಳ ಬಂಧನದ ಕುರಿತು ಅಗತ್ಯ ಸಿದ್ಧತೆಗಳನ್ನ ಈಗಾಗಲೇ ಆರಂಭಿಸಲಾಗಿದೆ. ಸುಪ್ರಿಂ ಕೋರ್ಟ್ ಆದೇಶದನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.