ರಾಜ್ಯ ಸರ್ಕಾರವು ಸೆ.22ರಿಂದ ಅ.7ರವರೆಗೆ 15 ದಿನಗಳ ಕಾಲ ಹೊಸ ಸಾಮಾಜಿಕ-ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಸಮುದಾಯದವರು ಕಡ್ಡಾಯವಾಗಿ ಒಕ್ಕಲಿಗ ಎಂದು ನಮೂದಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಮಂಗಳನಾಥ ಸ್ವಾಮೀಜಿ ಮನವಿ ಮಾಡಿದ್ದಾರೆ. ಪಟ್ಟಣದ ಹೊರವಲಯದ ಆರ್.ಎಸ್. ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜನಾಂಗದ ಜಾತಿಗಣತಿ ಮತ್ತು ಸಾಮಾಜಿಕ-ಆರ್ಥಿಕ ಸಮೀಕ್ಷೆ ಕುರಿತು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.