ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹೊಳಲ್ಕೆರೆ ರಸ್ತೆಯ ಆಂಜನೇಯ ದೇವಸ್ಥಾನದ ಬಳಿ ಬೀಕರ ಅಪಘಾತ ನಡೆದು ಚಿತ್ರದುರ್ಗ ತಾಲ್ಲೂಕಿನ ಜಂಪಣ್ಣನ ಹಟ್ಟಿ ಮೂಲದ (26) ವರ್ಷದ ಯುವಕ ಸಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ., ಅಪಘಾತ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತ ವಿಷಯ ತಿಳಿದು ಕೂಡಲೇ ಗ್ರಾಮಾಂತರ ಪೊಲೀಸ್ ಠಾಣೆ PI ಬಾಲಚಂದ್ರ ನಾಯ್ಕ್ ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲನೆ ನಡೆಸಿ ಮೃತದೇಹವನ್ನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.