ಹುಬ್ಬಳ್ಳಿ: ನೇಮಕಾತಿಗಾಗಿ ಅಭ್ಯರ್ಥಿಗಳು ಹೋರಾಟ ಮಾಡುತ್ತಿದ್ದಾರೆ. ಆದಷ್ಟು ಬೇಗ ಅಭ್ಯರ್ಥಿಗಳಿಗೆ ನಮ್ಮ ಸರ್ಕಾರ ಸಿಹಿ ಸುದ್ದಿ ಕೊಡುತ್ತೆ ಎಂದು ಸಚಿವ ರಾಮಲಿಂಗರೆಡ್ಡಿ ಭರವಸೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸು ಇಲಾಖೆಯಿಂದ ಅನುಮತಿ ಬೇಕಾಗಿದೆ. ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲಾಗಿದೆ. ಇನ್ನೂ ಒಂದು ಬಾರಿ ಭೇಟಿಯಾಗಿ ಸಮಸ್ಯೆ ಬಗ್ಗೆ ಹೇಳಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.ಸಾರಿಗೆ ನೌಕರರ ವೇತನ ಪರಿಷ್ಕರಣೆ ನನ್ನ ಕೈಯಲ್ಲಿ ಇಲ್ಲ. ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.