ಗ್ರಾಮ ಪಂಚಾಯತ್ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಯೋಜನೆಗಳನ್ನು ರೂಪಿಸುವಾಗ ಸಾರ್ವಜನಿಕರ ಅಪೇಕ್ಷೆಗಳನ್ನು ಸೇರ್ಪಡೆಗೊಳಿಸಿ, ಸಮಗ್ರ ಯೋಜನೆ ಸಿದ್ದಪಡಿಸುವಂತೆ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ತಿಳಿಸಿದರು. ಅವರು ಶುಕ್ರವಾರ ಮಧ್ಯಾಹ್ನ 3ರವರೆಗೆ ಶಿರಸಿಯ ಅಂಬೇಡ್ಕರ್ ಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಳಮಟ್ಟದಿಂದ ಯೋಜನೆಗಳನ್ನು ರೂಪಿಸುವ ಕುರಿತ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.