ಆಳಂದ: ಪಟ್ಟಣದಲ್ಲಿ ಎರಡು ನೂತನ ನಗರ ಸಾರಿಗೆ ಬಸ್ಗೆ ಶಾಸಕ ಬಿಆರ್ ಪಾಟೀಲ್ ಚಾಲನೆ
ಆಳಂದ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಎರಡು ನೂತನ ನಗರ ಸಾರಿಗೆ ಬಸ್ ಗೆ ಚಾಲನೆ ನೀಡಲಾಯಿತು. ಶಾಸಕ ಬಿಆರ್ ಪಾಟೀಲ್ ಹಸಿಎಉ ಧ್ವಜ ತೋರಿಸಿ ಬಸ್ಗೆ ಚಾಲನೆ ನೀಡಿದರು.. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಚಾರ ಸೇವೆ ಒದಗಿಸಲಾಗಿದೆ ಎಂದು ಶಾಸಕಬಿಆರ್ ಪಾಟೀಲ್ ಹೇಳಿದರು.. ಈ ವೇಳೆ ಗ್ಯಾರಂಟಿ ಯೋಜನೆ ಸಮಿತಿಯ ತಾಲೂಕು ಅಧ್ಯಕ್ಷರು, ಸದಸ್ಯರು ಸೇರಿದಂತೆ ಅನೇಕ ಮುಖಂಡರು, ಘಟಕದ ವ್ಯವಸ್ಥಾಪಕ ನಿರ್ದೇಶಕರು,ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಗುರುವಾರ 5 ಗಂಟೆಗೆ ಮಾಹಿತಿ ಲಭ್ಯವಾಗಿದೆ.