ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಇಲ್ಲಿಯ ಕಾರವಾರ ರಸ್ತೆ ಎಂಟಿಎಸ್ ಕಾಲನಿ ಹತ್ತಿರ ರಾಜಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ನೇಕಾರ ನಗರದ ಸುಷ್ಮಾ ದಡ್ಡಿಗೌಡರ(40) ಮೃತ ಮಹಿಳೆ. ಸುಷ್ಮಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಮಂಗಳವಾರ ರಾತ್ರಿ ಮನೆ ಬಿಟ್ಟುಬಂದು ರಾಜಕಾಲುವೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ನಾಲಾದಲ್ಲಿ ಮೃತ ದೇಹವನ್ನು ನೋಡಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ನಗರದ ಕೆಎಂಸಿಆರ್ಐಗೆ ಮೃತ ದೇಹ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.