ಜಿಲ್ಲಾಧಿಕಾರಿಗಳ ಪ್ರಾಂಗಣದಲ್ಲಿ ಕೆ ಸಿ ರೆಡ್ಡಿ ಪುತ್ತಳಿ ನಿರ್ಮಾಣಕ್ಕೆ ನಿರ್ಧಾರ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿರವರ ಪುತ್ತಳಿ ನಿರ್ಮಾಣಕ್ಕೆ ಇಂದು ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯಲ್ಲಿ ಕರೆದಿದ್ದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಶಾಸಕ ಕೆ ವೈ ನಂಜೇಗೌಡ ತಿಳಿಸಿದ್ದಾರೆ ಕರ್ನಾಟಕದ ಮೊದಲ ಮುಖ್ಯಮಂತ್ರಿ ಆಗಿದ್ದ ದಿವಂಗತ ಕೆ ಸಿ ರೆಡ್ಡಿರವರ ಪುತ್ತಳಿಯನ್ನು ಕೋಲಾರ ನಗರದ ಹೊರವಲಯದ ಜಿಲ್ಲಾಧಿಕಾರಿ ಪ್ರಾಂಗಣದಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದ್ದು ಜಿಲ್ಲಾಧಿಕಾರಿಗಳು ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿ ಮುಂದಿನ ಯೋಜನೆಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ