ಸದಾಶಿವನಗರದಲ್ಲಿ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಶಾಸಕ ಆನೇಕಲ್ ಶಿವಣ್ಣ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಡಿಕೆಶಿ ಅವಕಾಶ ಕೇಳೋದ್ರಲ್ಲಿ ತಪ್ಪೇನಿದೆ? ಅವ್ರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಕಷ್ಟ ಕಾಲದಲ್ಲಿ ಪಕ್ಷ ಕಟ್ಟಿ ಮುನ್ನಡೆಸಿದ್ದಾರೆ. ದಲಿತ ಸಿಎಂ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಪವರ್ ಶೇರಿಂಗ್ ವಿಚಾರ ಮಾತಾಡುವಷ್ಟು ದೊಡ್ಡವನಲ್ಲ, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಮೂರು ಬಾರಿ ಎಂಎಲ್ ಎ ಆಗಿದ್ದೇನೆ. ನನಗೂ ಒಂದು ಅವಕಾಶ ಕೊಡಿ ಎಂದು ಕೇಳಿದ್ದೇನೆ, ದೆಹಲಿಗೂ ಹೋಗಿ ಸಚಿವಸ್ಥಾನಕ್ಕೆ ಮನವಿ ಮಾಡಿದ್ದೇನೆ ಎಂದರು.