ಬಿಜೆಪಿ ಕಚೇರಿಯಲ್ಲಿ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಮಲ್ಲೇಶ್ವರಂನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಶ್ರೀರಾಮುಲು, ರೈತ ಮೋರ್ಚಾ ಅಧ್ಯಕ್ಷ ಎ.ಎಸ್ ಪಾಟೀಲ್ ನಡಹಳ್ಳಿ, ವಿಧಾನಸಭೆ ವಿಪಕ್ಷ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಸುದ್ದಿಗೋಷ್ಟಿ ನಡೆಸಿದ್ದು, ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ವಿಜಯನಗರ ಬಳ್ಳಾರಿ, ಕೊಪ್ಪಳದ ಬಿಜೆಪಿ ಶಾಸಕರು, ಸಂಸದರು, ಪ್ರಮುಖ ಕಾರ್ಯಕರ್ತರ ಸಭೆ ನಡೆಸಲಾಯ್ತು. ರೈತರ ಸಮಸ್ಯೆ ಬಗ್ಗೆ ಸಮಗ್ರ ಚರ್ಚೆ ಮಾಡಲಾಯಿತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಉತ್ತರ ಕರ್ನಾಟಕ ಭಾಗದ ರೈತರ ಸಮಸ್ಯೆ ಆಲಿಸ್ತಿಲ್ಲ. ಬರದ ಸಂಧರ್ಭದಲ್ಲಿ, ಅತಿವೃಷ್ಠಿ ಸಂಧರ್ಭದಲ್ಲಿ ತಲೆ ಕಡೆಸಿಕೊಳ್ಳಲಿಲ್ಲ.