ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ ವಿಚಾರದಲ್ಲಿ ಜನರು ಗೊಂದಲಕ್ಕೀಡಾಗಿದ್ದಾರೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಆದಷ್ಟು ಬೇಗನೆ ಈ ಗೊಂದಲವನ್ನು ನಿವಾರಣೆ ಮಾಡಬೇಕೆಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನೀಲ ಕುಮಾರ ಪಾಟೀಲ್ ಹೇಳಿದರು.