ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯ ವ್ಯಾಪಾರಸ್ಥರೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಸಭೆ ನಡೆಸಿದರು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ,ಕುಡಿಯುವ ನೀರು ಸರಬರಾಜು, ಇ ಸ್ವತ್ತು ಹಾಗೂ ಸ್ವಚ್ಛತಾ ನಿರ್ವಹಣೆಯ ಸಮಸ್ಯೆಗಳ ಕುರಿತು ಆಲಿಸಿ,ತ್ವರಿತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.. ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳಾದ ಕೆ.ಎಚ್.ಗುರುಪ್ರಸಾದ, ಪಾಲಿಕೆಯ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರ, ರಾಜಣ್ಣ ಕೊರವಿ, ಪ್ರಮುಖರಾದ ಚನ್ನು ಹೊಸಮನಿ, ರಾಜಕಿರಣ ಮೆಣಸಿನಕಾಯಿ ಹಾಗೂ ಇತರರು ಉಪಸ್ಥಿತರಿದ್ದರು.