ಹುಮ್ನಾಬಾದ್: ನಗರದಲ್ಲಿ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘದಿಂದ ಶಿಕ್ಷಕರ ದಿನಾಚರಣೆ ಹಿನ್ನೆಲೆ ಸಂಭ್ರಮದ ಮೆರವಣಿಗೆ
Homnabad, Bidar | Sep 13, 2025 ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘದ ವತಿಯಿಂದ ನಗರದಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ಶಿಕ್ಷಕರ ದಿನಾಚರಣೆಯಲ್ಲಿ ಡಾ. ಎಸ್. ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಅವರು ಡಾ. ಎಸ್ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಘದ ಪದಾಧಿಕಾರಿಗಳು ಇದ್ದರು.