ಹಳಿಯಾಳ : ಹಳಿಯಾಳ - ಯಲ್ಲಾಪುರ ರಾಜ್ಯ ಹೆದ್ದಾರಿಯ ಕೆಸರೊಳ್ಳಿಯ ಹತ್ತಿರ ವೇಗವಾಗಿ ಬಂದ ಟ್ರ್ಯಾಕ್ಟರೊಂದು ಯಾವುದೇ ಮುನ್ಸೂಚನೆಯನ್ನು ನೀಡದೇ ಅಡ್ಡ ರಸ್ತೆಗೆ ನುಗ್ಗಿದ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸವಾರರಿಗೆ ಗಂಭೀರ ಗಾಯವಾದ ಘಟನೆ ಇಂದು ಶುಕ್ರವಾರ ಮಧ್ಯಾಹ್ನ ಒಂದುವರೆ ಗಂಟೆ ಸುಮಾರಿಗೆ ನಡೆದಿದೆ. ಗಾಯಗೊಂಡ ದ್ವಿಚಕ್ರ ವಾಹನ ಸವಾರರಿಬ್ಬರೂ ಪೊಲೀಸ್ ಸಿಬ್ಬಂದಿಗಳೆಂದು ತಿಳಿದು ಬಂದಿದೆ. ಗಾಯಗೊಂಡವರನ್ನು ತಕ್ಷಣವೇ ಹಳಿಯಾಳ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.