ಶಿರಸಿ: ಜಿಲ್ಲಾ ಕಾರ್ಯನಿರತ ಪತ್ರಿಕರ್ತರ ಸಂಘದಿಂದ ಡಾ.ಯು.ಚಿತ್ತರಂಜನ್ ಪ್ರಶಸ್ತಿ ಘೋಷಣೆ : ಪತ್ರಕರ್ತ ಗಣೇಶ ಇಟಗಿ ಆಯ್ಕೆ
ಡಾ. ಯು. ಚಿತ್ತರಂಜನ್ ಪ್ರಶಸ್ತಿಗೆ ಪತ್ರಕರ್ತ ಗಣೇಶ ಇಟಗಿ ಆಯ್ಕೆ ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೂತನವಾಗಿ ಸ್ಥಾಪಿಸಿರುವ ಡಾ.ಯು. ಚಿತ್ತರಂಜನ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಗಣೇಶ ಇಟಗಿ ಆಯ್ಕೆಯಾಗಿದ್ದಾರೆ ಎಂದು ಅಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ ತಿಳಿಸಿದ್ದಾರೆ. ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಭಟ್ ಅವರು ಡಾ. ಯು. ಚಿತ್ತರಂಜನ್ ಹೆಸರಿನಲ್ಲಿ ದತ್ತಿನಿಧಿಯನ್ನು ಸ್ಥಾಪಿಸಬೇಕೆಂದು ಇಚ್ಛಿಸಿ ಜಿಲ್ಲಾಧ್ಯಕ್ಷ ಜಿ. ಸುಬ್ರಾಯ ಭಟ್ಟರೊಂದಿಗೆ ಚರ್ಚಿಸಿ ಪ್ರಶಸ್ತಿಗೆ ಮೂಲನಿಧಿಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ವರ್ಷದಿಂದ ಡಾ. ಯು. ಚಿತ್ತರಂಜನ್ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.