ಮಕ್ಕಳು ಶಿಕ್ಷಣ ಕಲಿಕೆಗೆ ಪೂರಕ ಸೌಲಭ್ಯಗಳಿಲ್ಲದ ಸಂದರ್ಭದಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆ ಈ ಭಾಗದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದೆ. ನಿರಂತರವಾಗಿ ಸುಮಾರು 6-7 ದಶಕಗಳ ಕಾಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ತಾರಾನಾಥ ಶಿಕ್ಷಣ ಸಂಸ್ಥೆ ಕಾರ್ಯ ಶ್ಲಾಘನೀಯವಾಗಿದೆ ಅಲ್ಲದೆ ಜಿಲ್ಲೆಯಲ್ಲಿ ಮೊದಲಬಾರಿಗೆ ಕಾನೂನು ಮಹಾವಿದ್ಯಾಲಯ ಸ್ಥಾಪಿಸಿದ ಕೀರ್ತಿ ಈ ಸಂಸ್ಥೆಗಿದೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಬೋಸರಾಜು ಅವರು ಶನಿವಾರ 11 ಗಂಟೆಗೆ ಆಯೋಜಿಸಿದ್ದ ಕಾಲೇಜು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.