ಸಾಲದ ಶೂಲಕ್ಕೆ ಸಿಲುಕಿ ಹಾಳು ಬಿದ್ದಿರುವ ಬೀದರ್ ಜಿಲ್ಲೆಯ ರೈತರ ಜೀವನಾಡಿ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಶೀಘ್ರ ಲಿಸ್ನಲ್ಲಿ ಕೊಡುವ ಮೂಲಕ ಸರ್ಕಾರ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹುಮ್ನಾಬಾದ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಸಿದ್ದು ಪಾಟೀಲ್ ಅವರು ಬೆಳಗಾವಿ ಅಧಿವೇಶನದಲ್ಲಿ ಮಂಗಳವಾರ ರಾತ್ರಿ 7:45 ಕ್ಕೆ ಸರಕಾರಕ್ಕೆ ಮನವಿ ಮಾಡಿದರು.