ಪಾಂಡವಪುರ : ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಲ್ ನ ಲಾಡ್ಜ್ ವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ದಾಳಿ ಮಾಡಿ ರುವ ಪೊಲೀಸರ ವೇಶ್ಯಾವಾಟಿಕೆ ಯಲ್ಲಿ ತೊಡಗಿದ್ದ ಇಬ್ಬರು ಮಹಿಳೆ ಯರನ್ನು ರಕ್ಷಿಸಿದ್ದಾರೆ. ಈ ಲಾಡ್ಜ್ ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಮಂಗಳವಾರ ಸಾಯಂಕಾಲ 6.30 ರ ಸಮಯದಲ್ಲಿ ದಾಳಿ ನಡೆಸಿರುವ ಶ್ರೀರಂಗಪಟ್ಟಣ ಡಿವೈಎಸ್ಪಿ ಶಾಂತ ಮಲ್ಲಪ್ಪ ಹಾಗೂ ಸಿಬ್ಬಂದಿ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ದ್ದಾರೆ. ಲಾಡ್ಜ್ ಮಾಲೀಕರು ಸಿಬ್ಬಂದಿ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.