ಮಾಜಿ ರೌಡಿಶೀಟರ್ ನೇತೃತ್ವದ ಗ್ಯಾಂಗ್ನಿಂದ ಗುಟ್ಕಾ ವ್ಯಾಪಾರಿಯ ಕಾರು ಅಡ್ಡಗಟ್ಟಿ ರಾಬರಿ ನಡೆಸಿ ಹೆಚ್ಚಿನ ಹಣಕ್ಕೆ ಕಿಡ್ನ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಡರಹಳ್ಳಿ ವ್ಯಾಪ್ತಿಯ ಬಿಇಎಲ್ ಲೇಔಟ್ನ ಪೈಪ್ಲೈನ್ ಬಳಿ ಸೋಮವಾರ ರಾತ್ರಿ 11:30ರ ಸುಮಾರಿಗೆ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಣ್ಣ ಅಂಗಡಿಗಳಿಗೆ ಗುಟ್ಕಾ ಮತ್ತು ಪಾನ್ ಮಸಾಲಾ ಸಪ್ಲೈ ಮಾಡುತ್ತಿದ್ದ ಮುಕೇಶ್ ಭಾಯ್ ಎಂಬುವವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಸೋಮವಾರ ರಾತ್ರಿ ಸುಮಾರು 11:30ರ ಸುಮಾರಿಗೆ ಮುಕೇಶ್ ಭಾಯ್ ಮತ್ತು ಜಮಾಭಾಯ್ ಅವರು 3.5 ಲಕ್ಷ ರೂಪಾಯಿ ಮೌಲ್ಯದ ಗುಟ್ಕಾವನ್ನು ಕಾರಿನಲ್ಲಿ ತುಂಬಿಕೊಂಡು ಮನೆ ಕಡೆಗೆ ಹೊರಟಿದ್ದರು. ಈ ವೇಳೆ, ಸ್ವಿಫ್ಟ್ ಕಾರಿನಲ್ಲಿ ಬಂದ ಐದಾರು ಮಂದಿಯ ಗ್ಯಾಂಗ್,