ಸೊರಬ ತಾಲೂಕಿನ ಉಳವಿ ಸಮೀಪದ ದೂಗೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆದಿದೆ. ಅಪಘಾತದಲ್ಲಿ ದಾವಣಗೆರೆಯ ದಂಪತಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಗೊಂಡವರು ದಾವಣಗೆರೆಯ ರಾಜೇಶ್ ಹಾಗೂ ಪದ್ಮಿನಿ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾವಣಗೆರೆಯಿಂದ ಮಂಗಳೂರಿಗೆ ಪದ್ಮಿನಿಗೆ ಹುಷಾರು ಇಲ್ಲದ ಕಾರಣ ಚಿಕಿತ್ಸೆಗಾಗಿ ರಾಜೇಶ್ ಕರೆದೊಯ್ಯುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.