ಹುಬ್ಬಳ್ಳಿ : ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನವೆಂಬರ್ ೭ ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ ೭ ರಂದು ಬೆ. ೯ ಗಂಟೆಗೆ ಬೆಂಗಳೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ೧೦ ಗಂಟೆಗೆ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಬೆ. ೧೧ ಗಂಟೆಗೆ ಹುಬ್ಬಳ್ಳಿ ನವೀಕೃತ ಕೇಂದ್ರದ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ಇತರೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ರಾತ್ರಿ. ೮.೧೫ ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ಅವರು ಬೆಂಗಳೂರಿಗೆ ತೆರಳಲಿದ್ದಾರೆ.