ಚಿಕ್ಕಬಳ್ಳಾಪುರ: ಸಂಸದ ಸುಧಾಕರ್ ಹೇಳಿಕೆ ಖಂಡಿಸಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ
ಮಂಚೇನಹಳ್ಳಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರೈತ ಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂಕಳೆದ ದಿನವಷ್ಟೇ ಸಂಸದ ಸುಧಾಕರ್ ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಗಂಭೀರ ಆರೋಪ ಮಾಡಿದ್ದು ಇಂದು ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಡಿಸಿ ಕಚೇರಿ ಬಳಿ ಜಮಾಯಿಸಿ ಸಂಸದ ಸುಧಾಕರ್ ವಿರುದ್ದ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ಸುಳ್ಳು ಹೇಳಿಕೆಯನ್ನು ನೀಡುವುದು ಸರಿಯಿಲ್ಲಾ ಎಂದು ಆರೋಪ ಮಾಡಿ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು..