ಹುಬ್ಬಳ್ಳಿ: ಮೂಲತಃ ಹುಬ್ಬಳ್ಳಿಯವರಾದ,ಪ್ರಸ್ತುತ ಹೈದ್ರಾಬಾದ ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿರುತ್ತಿರುವ IPS ಅಧಿಕಾರಿಗಳಾದ ವಿಶ್ವನಾಥ ಸಜ್ಜನರ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ನಿರಂಜನ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀoದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮಾಜಿ ಸಂಸದರು ಹಾಗೂ ಹಿರಿಯರಾದ ವಿಜಯ ಸಂಕೇಶ್ವರ, ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕ್ರಣ್ಣ ಮುನವಳ್ಳಿ, ಶಾಸಕರಾದ ಮಹೇಶ್ ಟೆಂಗಿನಕಾಯಿ, ಪ್ರಸಾದ ಅಬ್ಬಯ್ಯ ಸೇರಿದಂತೆ ಉಪಸ್ಥಿತರಿದ್ದರು.