ಕರ್ನಾಟಕದ ದಕ್ಷ ಐ.ಎ.ಎಸ್ ಅಧಿಕಾರಿಯಾಗಿ ಮನೆ ಮಾತಾಗಿದ್ದ ಮಹಾಂತೇಶ ಬೀಳಗಿ ಅವರು ಕಾರು ಅಪಘಾತದಲ್ಲಿ ನಿಧನರಾಗಿರುವ ಸುದ್ದಿ ತಿಳಿದು ಆಘಾತವಾಗಿದೆ ಎಂದು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ತಮ್ಮ ವಿಧ್ಯಾಭ್ಯಾಸ ಪೂರ್ಣಗೊಳಿಸಿ ಧಾರವಾಡದಲ್ಲಿ ಉಪ ವಿಭಾಗ ಅಧಿಕಾರಿಯಾಗಿ, ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ತದನಂತರದಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿದ್ದ ಅವರ ಜೀವನ ನಿಜಕ್ಕೂ ಅನುಕರಣೀಯ, ಅವರ ನಿಧನದಿಂದ ಕರ್ನಾಟಕಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ