ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು, ಕರ್ನಾಟಕವನ್ನು ಗೂಂಡಾ ರಾಜ್ಯದಿಂದ ರಕ್ಷಿಸುವಂತೆ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಇಂದು ಲೋಕಭವನದ ಬಳಿ ಮಾತನಾಡಿದ ಅವರು, ಬಿಜೆಪಿ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ, ದ್ವೇಷ ಭಾಷಣ ಮಸೂದೆಯನ್ನು ವಿರೋಧಿಸಿ ಮನವಿ ನೀಡಿದೆ ಎಂದರು. ವಿಧಾನಮಂಡಲದಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡದಿರುವುದನ್ನು ಅವರು ಆಕ್ಷೇಪಿಸಿದರು. ಈ ನಿಯೋಗದಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಪಿ. ಸಿ. ಮೋಹನ್, ಶಾಸಕರಾದ ಎಸಸ್. ಆರ್. ವಿಶ್ವನಾಥ್, ಎಸ್. ಮುನಿರಾಜು ಸೇರಿದಂತೆ ಹಲವು ಮುಖಂಡರು