ತೆರಿಗೆ ಸಂಗ್ರಹ ಹಣ ಅಂದೇ ಬ್ಯಾಂಕ್ಗೆ ಜಮೆ ಮಾಡದೆ ಅವ್ಯವಹಾರ ನಡೆಸಿದ್ದಾರೆ, ನೀರುಗಂಟಿ ಹುದ್ದೆಯಲ್ಲಿದ್ದವರಿಗೆ ಬಿಲ್ ಕಲೆಕ್ಟರ್ ಹುದ್ದೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿ ಶಿಕಾರಿಪುರ ತಾಲೂಕಿನ ಗೊದ್ದನಕೊಪ್ಪ ಗ್ರಾ.ಪಂ. ಸದಸ್ಯರು ಕಚೇರಿಗೆ ಬೀಗಹಾಕಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿದ್ದ ಇಮ್ತಿಯಾಜ್ ಅಹಮದ್ ನಾಲ್ಕು ಹಳ್ಳಿಗಳ ತೆರಿಗೆ ಸಂಗ್ರಹ ಹಣ ಬ್ಯಾಂಕ್ಗೆ ಕಟ್ಟದೇ 8 ರಿಂದ 30 ದಿನದವರೆಗೂ ಹಣ ಕೈಯಲ್ಲಿ ಇಟ್ಟುಕೊಂಡಿರುವ ದಾಖಲೆಗಳಿವೆ, ನೀರುಗಂಟಿ ಆಗಿದ್ದ ಮಹಿಳೆಗೆ ಬಿಲ್ ಕಲೆಕ್ಟರ್ ಆಗಿ ನೇಮಿಸಿದ್ದಾರೆ, 15 ನೇ ಹಣಕಾಸು ವರ್ಗ ಒಂದರ ಹಣ ದುರ್ಬಳಕೆ ಮಾಡಿದ್ದು ಈ ಕುರಿತು ಲಿಖಿತ ದೂರು ನೀಡಿದರು ಪ್ರಯೋಜನವಾಗಿಲ್ಲ