ದಾಂಡೇಲಿ : ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಳೆದ 110 ವರ್ಷಗಳ ಇತಿಹಾಸದಲ್ಲಿ ಕಂಡು ಕೇಳರಿಯದಷ್ಟು 2021 ರಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದವರು ಅನೈತಿಕವಾಗಿ ಹದಗೆಡಿಸಿದ್ದಾರೆ ಎಂದು ಹೆಸರು ಉಲ್ಲೇಖ ಮಾಡದೇ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸದ್ಯ ಅಮಾನತ್ತಿನಲ್ಲಿರುವ ಡಾ.ಮಹೇಶ ಜೋಶಿಯವರ ಸರ್ವಾಧಿಕಾರಿ ಧೋರಣೆ ಹಾಗೂ ಭೃಷ್ಟಾಚಾರದ ವಿರುದ್ಧ ಶಿವಮೊಗ್ಗ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ ಅವರು ಆಕ್ರೋಶವನ್ನು ವ್ಯಕ್ತಪಡಿಸಿ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಅವರು ಭಾನುವಾರ ಬೆಳಿಗ್ಗೆ 11.30 ಗಂಟೆಗೆ ದಾಂಡೇಲಿ ನಗರದ ಹಳೆ ನಗರಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.