ಧಾರವಾಡ ನಗರದ ಪ್ರಮುಖ ರಸ್ತೆಗಳಲ್ಲಿನ ಬೀದಿ ದೀಪಗಳು ಕೆಟ್ಟು ಹೋಗಿದ್ದು, ರಸ್ತೆಗಳು ಕತ್ತಲು ಆವರಿಸಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಗಂಭೀರವಾಗಿ ಪರಿಗಣಿಸಿ, ಕೂಡಲೇ ಬೀದಿ ದೀಪಗಳನ್ನು ಸರಿಪಡಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.