ಕಲಬುರಗಿ: ಜು9 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ನಗರದಲ್ಲಿ ಸಿಐಟಿಯು ಸಂಘಟನೆ ಮುಖಂಡ ಎಂಬಿ ಸಜ್ಜನ್
ಕಲಬುರಗಿ : ದೇಶದ ಸಂಪತ್ತನ್ನು ಸೃಷ್ಟಿ ಮಾಡುವ ಕಾರ್ಮಿಕರನ್ನ ಕಡೆಗಣಿಸ್ತಿರೋ ಕೇಂದ್ರ ಸರ್ಕಾರದ ನೀತಿಗಳನ್ನ ಖಂಡಿಸಿ ಜುಲೈ 9 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಮುಷ್ಕರಕ್ಕೆ ಪ್ರತಿಯೊಬ್ಬರೂ ಬೆಂಬಲಿಸಿ ಯಶಸ್ವಿಗೊಳಿಸಬೇಕೆಂದು ಸಿಐಟಿಯು ಸಂಘಟನೆ ಮುಖಂಡ ಎಂಬಿ ಸಜ್ಜನ್ ಮನವಿ ಮಾಡಿದ್ದಾರೆ. ಜು6 ರಂದು ಬೆಳಗ್ಗೆ 11 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲಿಸಿ ಅಂದು ಬೆಳಗ್ಗೆ 11 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಲಾಗುತ್ತಿದೆ.. ಬಳಿಕ ಡಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಂಬಿ ಸಜ್ಜನ್ ಹೇಳಿದ್ದಾರೆ.