ಸಕಲೇಶಪುರ: ಬ್ಯಾಕರವಳ್ಳಿ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮರ, ಎರಡು ಗೂಡ್ಸ್ ವಾಹನ, ಇಬ್ಬರು ಚಾಲಕರು ಪೊಲೀಸರ ವಶ
ಹಾಸನ:: ಸಕಲೇಶಪುರ ತಾಲೂಕಿನ ಬ್ಯಾಕರವಳ್ಳಿ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ವಿವಿಧ ಜಾತಿಯ ಮರಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವುದೇ ಪರವಾನಗಿ ಪಡೆಯದೆ ಹಾಸನದ ಕಡೆಯಿಂದ ಮಂಗಳೂರು ಕಡೆಗೆ ಎರಡು ಗೂಡ್ಸ್ ವಾಹನಗಳಲ್ಲಿ ತರಕಾರಿ ಸಾಗಾಟ ಮಾಡುವ ರೀತಿ ಟಾರ್ಪಲ್ ಕಟ್ಟಿಕೊಂಡು ಇಬ್ಬರು ಅಪರಿಚಿತರು ಸಾಗಿಸುತ್ತಿದ್ದರು ಈ ವೇಳೆ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಧಾಳಿ ಮಾಡಿದ್ದಾರೆ. ಈ ವೇಳೆ ಅರ್ಎಪ್ಓ ಹೇಮಂತ್ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಏಳು ಟನ್ನಷ್ಟು ವಿವಿಧ ಜಾತಿಯ ಕಾಡುಮರಗಳು ಹಾಗೂ ಎರಡು ಗೂಡ್ಸ್ ವಾಹನಗಳು, ಇಬ್ಬರು ಚಾಲಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.