ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದೊಂಬರಾಟ ನಡೆದಿದ್ದು, ನವೆಂಬರ್ 27 & 28 ರಂದು ಮಂಡಲಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತೀ ಹೆಚ್ಚು ಶಾಸಕರನ್ನು ಹೊಂದಿದ ಪಕ್ಷ ರಾಜ್ಯದಲ್ಲಿ ಇದೆ. ಉತ್ತಮ ಆಡಳಿತ ನೀಡಬೇಕು. ಅತೀ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡಬಹುದಿತ್ತು. ಆದರೆ ರಾಜ್ಯದಲ್ಲಿ ಅತೀವೃಷ್ಟಿಗೆ ಬೆಳೆ ಹಾನಿಯಾಗಿದೆ. ರೈತರ ಹೋರಾಟ ಆಗುತ್ತಿವೆ. ಹೀಗಿರುವಾಗ ಸಿಎಂ ಕುರ್ಚಿಗೆ ಕಾಂಗ್ರೆಸ್ ರಾಜ್ಯ ಅಭಿವೃದ್ಧಿ ನಿರ್ಲಕ್ಷ್ಯ ಮಾಡಿ ಜನತೆಗೆ ವಂಚನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.