ಚಿತ್ರದುರ್ಗ ನಗರದಲ್ಲಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯ್ತು. ನಗರದ ಓಬವ್ವ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾ ಅಧ್ಯಕ್ಷ ಪಾಪಣ್ಣ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಮೂಲಕ ಆಗಮಿಸಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಕೆ ಮಾಡಿದರು. ವಿಕಲಚೇತನರಿಗೆ ವೇತನ ಹೆಚ್ಚಳ, ರಾಜ್ಯದಾಧ್ಯಂತ ಉಚಿತ ಬಸ್ ಪಾಸ್, ಪ್ರತ್ಯೇಕ ಸಚಿವಾಲಯ, ಡಿಸಿ ನೇತೃತ್ವದಲ್ಲಿ ಪ್ರತಿ ತಿಂಗಳು ಕುಂದು ಕೊರತೆ ಸಭೆ ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿದರು. ಈ ವೇಳೆ ಐವತ್ತಕ್ಕೂ ಹೆಚ್ಚು ಮಂದಿ ವಿಕಲಚೇತನರು ಭಾಗಿಯಾಗಿದ್ದರು