ಸಿರವಾರ ತಾಲ್ಲೂಕಿನ ನೀಲಗಲ್ ಗ್ರಾಮದ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವವು ಶನಿವಾರ 6 ಗಂಟೆಗೆ ಅದ್ದೂರಿಯಾಗಿ ನೆರವೇರಿತು. ಶ್ರೀ ಕ್ಷೇತ್ರ ನೀಲಗಲ್ ಮಹಾಸಂಸ್ಥಾನ ಬೃಹನ್ಮಠದ ಪೀಠಾಧಿಪತಿಗಳಾದ ಪಂಚಾಕ್ಷರ ಶಿವಾಚಾರ್ಯರು ಮತ್ತು ರೇಣುಕ ಶಾಂತಮಲ್ಲ ಶಿವಾಚಾರ್ಯ ಸ್ವಾಮಿಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಸಾವಿರಾರು ಭಕ್ತರು ಭಾಗಿಯಾಗಿ ದೇವರ ಕೃಪೆಗೆ ಪಾತ್ರರಾದರು.