ಜಲ ಸಂಪನ್ಮೂಲ ಇಲಾಖೆಯ ಅಭಿಯಂತರರು ನಾವಿನ್ಯ ತಂತ್ರಜ್ಞಾನದ ಕೌಶಲ್ಯಗಳನ್ನು ಬಳಸಿಕೊಳ್ಳುವ ಮೂಲಕ ಇಲಾಖೆಗೆ ಉತ್ಕೃಷ್ಟ ಸೇವೆ ನೀಡಬೇಕೆಂದು ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬುಧವಾರ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯಿಂದ ಆಯೋಜಿಸಿದ್ದ ‘ಜಲ ಸಂಕಲ್ಪ ಸಮಾವೇಶ ಹಾಗೂ ತರಬೇತಿ ಪಡೆದ ಜಲ ಸಂಪನ್ಮೂಲ ಇಲಾಖೆಯ ಅಭಿಯಂತರರ ಸಮ್ಮೇಳನದಲ್ಲಿ ಮಾತ