ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ಸೂಚನೆಯಂತೆ ಆಗಸ್ಟ್ 16ರಂದು ಸಂಜೆ 5 ಗಂಟೆಗೆ ಎಲ್ಲಾ ವಲಯಗಳಲ್ಲಿ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರ ನೇತೃತ್ವದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ನೆರವೇರಿಸಲಾಯಿತು. ಜೆಸಿಬಿಗಳು, ಟ್ರ್ಯಾಕ್ಟರ್ ಗಳು ಹಾಗು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಂಡು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 6 ವಲಯಗಳಲ್ಲಿ ನಡೆಸಿರುವ ಸ್ವಚ್ಛತಾ ಕಾರ್ಯ ಹಾಗೂ ಪಾದಚಾರಿ ಮಾರ್ಗದ ಒತ್ತುವರಿ ತೆರವುಗೊಳಿಸಲಾಯಿತು.