ಶಿವಪ್ರಕಾಶ್ ಅಲಿಯಾಸ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ರನ್ನು ಬಂಧಿಸಲು ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಅವರ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಬೆಂಗಳೂರಿನ ಸಿಐಡಿ ಕಚೇರಿ ಮುಂಭಾಗ ಶನಿವಾರ ಬಿಗಿ ಭದ್ರತೆ ನಿಯೋಜಿಸಲಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಬೈರತಿ ಬಸವರಾಜ್ ಬೆಂಬಲಿಗರು ಸಿಐಡಿ ಕಚೇರಿ ಬಳಿ ಬರುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ಬಾರಿ ಇದೇ ಪ್ರಕರಣದ ವಿಚಾರಣೆಗೆ ಬಂದಿದ್ದಾಗ ಅವರ ಬೆಂಬಲಿಗರು ಗಲಾಟೆ ಮಾಡಿದ್ದರು.