ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಸದಸ್ಯರು ವಿದ್ಯಾರ್ಥಿಗಳಿಂದ ಸಹಿಸಂಗಣ ಅಭಿಯಾನವಕ್ಕೆ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮೈಸೂರ್ ಬ್ಯಾಂಕ್ ಸರ್ಕಲ್ ಬಳಿ ಚಾಲನೆ ನೀಡಿದರು. ಅಭಿಯಾನದ ಆರಂಭವನ್ನು ನಗರದ ಆರ್.ಸಿ. ಕಾಲೇಜಿನ ಬಳಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ " ಅತ್ಯಂತ ದುಬಾರಿ ವೆಚ್ಚದ ನಮ್ಮ ಮೆಟ್ರೋ ದಿಂದಾಗಿ ವಿದ್ಯಾರ್ಥಿ ಸಮೂಹ ಸಂಪೂರ್ಣ ಮೆಟ್ರೋ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಸಂಚಾರ ಒತ್ತಡಗಳಿಂದಾಗಿ ಸಮಯಕ್ಕೆ ಸರಿಯಾಗಿ ತಲುಪಲಾಗದೆ ಸಾಕಷ್ಟು ಪರದಾಡುತ್ತಿದ್ದಾರೆ.