ಇನ್ನೂ ಈ ರೀತಿ ಗಂಭೀರ ಆರೋಪ ಎದುರಿಸುತ್ತಿರುವ ಸ್ವಾಮೀಜಿಯ ಹೆಸರು ಬ್ರಹ್ಮಾನಂದ ಗುರೂಜಿ ಅಂತ. ಈ ವಿಚಾರವಾಗಿ ಈತ ಹೇಳುವ ಮಾತೇ ಬೇರೆ. ಭಾಗ್ಯಲಕ್ಷ್ಮಿಯ ಗಂಡ ನರೇಶ್ ನನಗೆ ಬಹಳ ಪರಿಚಯ. ಹಾಗಾಗಿ ಅವರು ನಮ್ಮ ಬಳಿ ಬಂದು ಒಂದು ಸೈಟ್ ಕೊಡಿಸುವುದಾಗಿ ಕೇಳಿಕೊಂಡರು. ಆಗ ನನಗೆ ಪರಿಚಯ ಇದ್ದ ಒಬ್ಬರ ಬಳಿ ೧೧ ಲಕ್ಷಕ್ಕೆ ಸೈಟ್ ಕೊಡಿಸಿದ್ದ. ಅದು ಕೆಲವೇ ದಿನಗಳಲ್ಲಿ ಸೈಟ್ ಈ ಖಾತೆ ಮಾಡುವುದನ್ನ ಸರಕಾರ ನಿಲ್ಲಿಸಿತು. ಆಗ ಅವರ ಹಣವನ್ನ ವಾಪಸ್ ನೀಡಿದ್ದೇವೆ. ಈ ವೇಳೆ ಮಹಿಳೆ ಭಾಗ್ಯಲಕ್ಷ್ಮಿ ನನ್ನ ಜೊತೆ ಸಲುಗೆಯಿಂದ ಮಾತನಾಡಲು ಮುಂದಾದಳು. ಆಗ ನಾನು ಅವರ ನಂಬರ್ ಬ್ಲಾಕ್ ಮಾಡಿದೆ. ನಂತರ ಕೂಡ ಬೇರೆ ಬೇರೆ ನಂಬರ್ ಗಳಿಂದ ನನಗೆ ಪೋನ್ ಮತ್ತು ಮೆಸೇಜ್ ಮಾಡಿದರು. ಆದರೆ ಈಗ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇವರು ಮತ್ತು ನ