ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದ ನಿವಾಸಿ ಬಸಲಿಂಗಪ್ಪ, ಬಡ್ಡಿ ವ್ಯವಹಾರದ ಹೆಸರಿನಲ್ಲಿ ಅಮಾಯಕರನ್ನು ವಂಚಿಸುತ್ತಿದ್ದ. ಒಬ್ಬ ವ್ಯಕ್ತಿಗೆ 1,20,000 ರೂಪಾಯಿ ಸಾಲ ನೀಡಿ, ಆತನಿಂದ ಬರೋಬ್ಬರಿ 16 ಲಕ್ಷ ರೂಪಾಯಿ ಬಡ್ಡಿ ವಸೂಲಿ ಮಾಡಲು ಯತ್ನಿಸಿದ್ದಾನೆ. ಇದರಿಂದ ಬೇಸತ್ತ ಸಂತ್ರಸ್ತರು ಪೊಲೀಸರ ಮೊರೆ ಹೋಗಿದ್ದು, ಬಸಲಿಂಗಪ್ಪನ ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದ ಆಡಿಯೋ ಕರೆ ದಾಖಲೆಗಳನ್ನು ನೀಡಿದ್ದಾರೆ.