ಕನಕದಾಸರು ಮಾನವಕುಲದ ಕಲ್ಯಾಣಕ್ಕಾಗಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಎಂ ಆರ್ ಪಾಟೀಲ ತಿಳಿಸಿದರು. ಕುಂದಗೋಳ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಕುಂದಗೋಳ ತಾಲೂಕು ಆಡಳಿತದಿಂದ ನಡೆದ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನಕದಾಸರ ಕೀರ್ತನೆಗಳು ಸಮಾಜಕ್ಕೆ ನೀತಿ ಪಾಠಗಳನ್ನು ಹೇಳಿವೆ. ಆ ಎಲ್ಲ ಪಾಠಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.