ಮೊಳಕಾಲ್ಮುರು:-ಬಡವರ ಹಸಿವು ನೀಗಿಸಬೇಕಿದ್ದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಕಳ್ಳಕಾಕರ ಪಾಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡಿಪುರ ಗ್ರಾಮದಲ್ಲಿ ಸರ್ಕಾರಿ ಸಮುದಾಯ ಭವನದಲ್ಲಿ ಅಪಾರ ಪ್ರಮಾಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟು ಅನ್ಯ ರಾಜ್ಯಕ್ಕೆ ಲಾರಿಯಲ್ಲಿ ಸಾಗಾಣಿಕೆ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಮೊಳಕಾಲ್ಮೂರು ಪೊಲೀಸ್ ಠಾಣೆಯ ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆಯವರು ಅಕ್ರಮ ದಾಸ್ತನು ಕೇಂದ್ರದ ಮೇಲೆ ರೈಡ್ ಮಾಡಿದ್ದಾರೆ