ಹೆಗ್ಗಡದೇವನಕೋಟೆ: ಹೆಚ್.ಡಿ. ಕೋಟೆಗೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಸ್ಥಳ ಪರಿಶೀಲಿಸಿದ ಶಾಸಕ ಅನಿಲ್ ಚಿಕ್ಕಮಾದು
ಲೋಕಸಭಾ ಚುನಾವಣೆ ಪ್ರಯುಕ್ತ ಪ್ರಚಾರಕ್ಕಾಗಿ ಹೆಚ್.ಡಿ. ಕೋಟೆ ಪಟ್ಟಣಕ್ಕೆ ಏಪ್ರಿಲ್ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮ ನಡೆಯುವ ಸ್ಥಳವನ್ನು ಶಾಸಕ ಅನಿಲ್ ಚಿಕ್ಕಮಾದು ಗುರುವಾರ ಸಂಜೆ ಪರಿಶೀಲನೆ ನಡೆಸಿದರು. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಸಿಬ್ಬಂದಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಮೈಮುಲ್ ನಿರ್ದೇಶಕ ಈರೇಗೌಡ, ಪುರಸಭಾ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ಮಧು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಏಜಾದ್ ಪಾಷಾ, ಮುಖಂಡರಾದ ಮರಿದೇವಯ್ಯ ಇದ್ದರು.